ವಿಶ್ವ ಹೃದಯ ದಿನಾಚರಣೆ: ಮಂಗಳೂರಿನಲ್ಲಿ ಕೆಎಂಸಿ ಆಸ್ಪತ್ರೆಯ ವಾಕ್ಥಾನ್
- Kudla Info

- Sep 21
- 1 min read

ಮಂಗಳೂರು, ಸೆಪ್ಟೆಂಬರ್ 21: ಕೆಎಂಸಿ ಆಸ್ಪತ್ರೆ, ಮಂಗಳೂರಿನ ವತಿಯಿಂದ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಭಾನುವಾರ ಬೆಳಿಗ್ಗೆ 6:30ಕ್ಕೆ ವಾಕ್ಥಾನ್ ಆಯೋಜಿಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ಈ ಪಾದಯಾತ್ರೆ ಮರೆನಾ ಕ್ರೀಡಾ ಸಂಕೀರ್ಣದಲ್ಲಿ ಮುಕ್ತಾಯಗೊಂಡಿತು. ಹೃದಯ ಸಂಬಂಧಿ ಕಾಯಿಲೆಗಳ ಕುರಿತು ಜಾಗೃತಿ ಮೂಡಿಸಿ, ಆರೋಗ್ಯಕರ ಜೀವನ ಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ನಗರದ ವಿವಿಧ ಸಂಸ್ಥೆಗಳು, ಕುಟುಂಬಗಳು, ಕಾರ್ಪೊರೇಟ್ ನೌಕರರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡು 1,500 ಕ್ಕೂ ಹೆಚ್ಚು ಮಂದಿ ಭಾಗವಹಿಸಿದರು. ಮಂಗಳೂರು ನಗರ ಪೊಲೀಸ್ ಕಾನೂನು ಸುವ್ಯವಸ್ಥೆ ಡಿಸಿಪಿ ಮಿಥುನ್ ಎಚ್.ಎನ್ ಮತ್ತು ಎಸಿಪಿ (ಸಿಸಿಆರ್ಬಿ) ಗೀತಾ ಡಿ ಕುಲಕರ್ಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಷ್ಟ್ರೀಯ ಮಟ್ಟದ ಅಥ್ಲೀಟ್ ಮಾಸ್ಟರ್ ಯಶಸ್ ದೀಪಹಚ್ಚಿ ವಾಕ್ಥಾನ್ ಮುನ್ನಡೆಸಿದರು






Comments